Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya
error: Content is protected !!