25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.


ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಪ್ರಾಂತೀಯ ಸಂಚಾಲಕರಾದ ಬಿ.ಕೆ ವಸಂತರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಆರ್. ರಮೇಶ್, ದಲಿತ ಸಂಘರ್ಷ ಸಮಿತಿ ಮಾಜಿ ಸಂಚಾಲಕರಾದ ಸಂಜೀವ ರೆಂಕೆದಗುತ್ತು, ಗಣೇಶ್ ಮಾಸ್ಟರ್ ಸುದೇಮುಗೇರು ಭಾಗವಹಿಸಿ ಶುಭ ಹಾರೈಸಿದರು.

ಅಂಗನವಾಡಿ ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಮತ್ತು 12 ರಿಂದ 18 ವರ್ಷದ ಕಿಶೋರಿಯವರಿಗೆ ಸ್ಫರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಸುಮಾರು 26 ಮಂದಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿ.ಪಂ ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಅಶೋಕ್ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ರೋಹಿಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಭಾಗವಹಿಸಿದ 65 ಮಂದಿಗೆ ಉಪಹಾರದ ವ್ಯವಸ್ಥೆ ಒದಗಿಸಲಾಯಿತು. ಎಲ್ಲಾ ಕಾರ್ಯಕ್ರಮಗಳು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ನೇತೃತ್ವಲ್ಲಿ ನಡೆಯಿತು

Related posts

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya
error: Content is protected !!