July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

ಸೋಣಂದೂರು :ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಾಗೇಶ್ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ,ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಷನ್ ಲೋಬೊ ಹಾಗೂ ಕಾರ್ಯದರ್ಶಿಯಾದ ಸಂಧ್ಯಾ ಶೆಟ್ಟಿ, ಮುಖ್ಯ ಶಿಕ್ಷಕರಾದ ಅನಿತಾ ರೇಷ್ಮಾ ಡಿಸೋಜಾ ಹಾಗೂ ಸಹ ಶಿಕ್ಷಕಿಯರಾದ ರಕ್ಷಾ, ರಶ್ಮಿ, ಸವಿತಾ , ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷರಾದ ರಾಜೇಶ್ ಕುಲಾಲ್, ಸ್ಥಳೀಯರಾದ ಉಪೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಪರಿಚಯ ಅಕಸ್ಮಿಕವಾದರೂ ಅಗಲುವಿಕೆ ಅನಿವಾರ್ಯ ಎಂಬ ಮಾತಿನಂತೆ ತಮ್ಮ ಉನ್ನತ ವಿದ್ಯಾಭ್ಯಾಸಕ್ಕಾಗಿ ಈ ಶಾಲೆಯನ್ನು ತೊರೆದು ಬೇರೆ ಶಾಲೆಗೆ ಸೇರ್ಪಡೆಗೊಳ್ಳಲಿರುವ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹೇಳುವುದರ ಜೊತೆಗೆ ತಮ್ಮ ಸವಿ ನೆನಪಿಗಾಗಿ ಶಾಲೆಗೆ ಫ್ಯಾನ್ ಹಾಗೂ ಕುರ್ಚಿಗಳನ್ನು ಉಡುಗೊರೆಯಾಗಿ ನೀಡಿರುತ್ತಾರೆ.

ಕಾರ್ಯಕ್ರಮಕ್ಕೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಷನ್ ಲೋಬೊ ಹಾಗೂ ಉಪಾಧ್ಯಕ್ಷ ಪ್ರಕಾಶ್ ಪ್ರಭು ಇವರು ಬೆಳಗಿನ ಉಪಹಾರ ವ್ಯವಸ್ಥೆ, ಬಿಳ್ಕೊಳ್ಳುವಂತಹ ವಿದ್ಯಾರ್ಥಿಗಳಿಗೆ ಉಪೇಂದ್ರ ಆಚಾರ್ಯ ಇವರು ಫೋಟೋ ಫ್ರೇಮ್ ನೀಡಿದ್ದು, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬೀಳ್ಕೊಡುಗೆ ಸಮಾರಂಭವು ಪೂರ್ಣಗೊಂಡಿತು.

ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಈ ಕಾರ್ಯಕ್ರಮವನ್ನು 6ನೇ ತರಗತಿಯ ಆಯಿಷಾತ್ ಅಝ್ಮಮಿಯ ನಿರೂಪಿಸಿ, ಯಜ್ಞಶ್ರೀ ಸ್ವಾಗತಿಸಿ, ಫಾತಿಮಾತ್ ರಿಫಾ ವಂದನಾರ್ಪಣೆಗೈದರು. ಹಳೇ ವಿದ್ಯಾರ್ಥಿಗಳ ಸಭೆಯು ನಡೆದಿದ್ದು ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿ, ಪ್ರಾರಂಭೋತ್ಸವ ಹಾಗೂ ಶಾಲಾ ಚಟುವಟಿಕೆಗಳ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು

Related posts

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya
error: Content is protected !!