30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

ಸೋಣಂದೂರು :ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಾಗೇಶ್ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ,ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಷನ್ ಲೋಬೊ ಹಾಗೂ ಕಾರ್ಯದರ್ಶಿಯಾದ ಸಂಧ್ಯಾ ಶೆಟ್ಟಿ, ಮುಖ್ಯ ಶಿಕ್ಷಕರಾದ ಅನಿತಾ ರೇಷ್ಮಾ ಡಿಸೋಜಾ ಹಾಗೂ ಸಹ ಶಿಕ್ಷಕಿಯರಾದ ರಕ್ಷಾ, ರಶ್ಮಿ, ಸವಿತಾ , ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷರಾದ ರಾಜೇಶ್ ಕುಲಾಲ್, ಸ್ಥಳೀಯರಾದ ಉಪೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಪರಿಚಯ ಅಕಸ್ಮಿಕವಾದರೂ ಅಗಲುವಿಕೆ ಅನಿವಾರ್ಯ ಎಂಬ ಮಾತಿನಂತೆ ತಮ್ಮ ಉನ್ನತ ವಿದ್ಯಾಭ್ಯಾಸಕ್ಕಾಗಿ ಈ ಶಾಲೆಯನ್ನು ತೊರೆದು ಬೇರೆ ಶಾಲೆಗೆ ಸೇರ್ಪಡೆಗೊಳ್ಳಲಿರುವ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹೇಳುವುದರ ಜೊತೆಗೆ ತಮ್ಮ ಸವಿ ನೆನಪಿಗಾಗಿ ಶಾಲೆಗೆ ಫ್ಯಾನ್ ಹಾಗೂ ಕುರ್ಚಿಗಳನ್ನು ಉಡುಗೊರೆಯಾಗಿ ನೀಡಿರುತ್ತಾರೆ.

ಕಾರ್ಯಕ್ರಮಕ್ಕೆ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಷನ್ ಲೋಬೊ ಹಾಗೂ ಉಪಾಧ್ಯಕ್ಷ ಪ್ರಕಾಶ್ ಪ್ರಭು ಇವರು ಬೆಳಗಿನ ಉಪಹಾರ ವ್ಯವಸ್ಥೆ, ಬಿಳ್ಕೊಳ್ಳುವಂತಹ ವಿದ್ಯಾರ್ಥಿಗಳಿಗೆ ಉಪೇಂದ್ರ ಆಚಾರ್ಯ ಇವರು ಫೋಟೋ ಫ್ರೇಮ್ ನೀಡಿದ್ದು, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬೀಳ್ಕೊಡುಗೆ ಸಮಾರಂಭವು ಪೂರ್ಣಗೊಂಡಿತು.

ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಈ ಕಾರ್ಯಕ್ರಮವನ್ನು 6ನೇ ತರಗತಿಯ ಆಯಿಷಾತ್ ಅಝ್ಮಮಿಯ ನಿರೂಪಿಸಿ, ಯಜ್ಞಶ್ರೀ ಸ್ವಾಗತಿಸಿ, ಫಾತಿಮಾತ್ ರಿಫಾ ವಂದನಾರ್ಪಣೆಗೈದರು. ಹಳೇ ವಿದ್ಯಾರ್ಥಿಗಳ ಸಭೆಯು ನಡೆದಿದ್ದು ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿ, ಪ್ರಾರಂಭೋತ್ಸವ ಹಾಗೂ ಶಾಲಾ ಚಟುವಟಿಕೆಗಳ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು

Related posts

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!