24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

ಉಜಿರೆ: ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬವನ್ನು ಎಸ್. ಸಿ ಕಾಲೋನಿ ಕುಂಟಿನಿ ಉಜಿರೆಯಲ್ಲಿ ಆಚರಿಸಲಾಯಿತು.

ಟ್ರಸ್ಟ್ ನ ಉಪಾಧ್ಯಕ್ಷ ನಾರಾಯಣ್ ಗೌಡ ಕೊಳಂಬೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಭಾಷ್ ಗುರುವಾಯನಕೆರೆ, ಲಕ್ಷ್ಮಿ ನಾರಾಯಣ ಶೆಣೈ, ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ, ಅಂಬೇಡ್ಕರ್ ಬಗ್ಗೆ ಹಿತನುಡಿಯನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆಯ ಅಧ್ಯಕ್ಷ ಡಾ.ಎಂ.ಎಂ ದಯಾಕರ್ ವಹಿಸಿಕೊಂಡು ಅಂಬೇಡ್ಕರ್ ಜಯಂತಿಯ ಮಹತ್ವ, ಅಂಬೇಡ್ಕರ್ ಅವರ ಜೀವನದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಆಗಮಿಸಿದ ಸ್ಥಳೀಯ ಬಾಂಧವರಿಗೆ ವಿಶು ಕಣಿಯನ್ನು ವಿತರಣೆ ಮಾಡಲಾಯಿತು. ಶ್ರೀಮತಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಗೋಶಾಲೆಯ ಕಾರ್ಯದರ್ಶಿ ನವೀನ್ ನೆರಿಯ ಧನ್ಯವಾದ ಸಲ್ಲಿಸಿದರು. ಟ್ರಸ್ಟ್ ನ ಮ್ಯಾನೇಜರ್ ಶ್ರೀಶ ಭಟ್ ಮತ್ತು ಶ್ರೀಮತಿ ಅನುಶ್ರೀ ಮುರುಳಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!