23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏಪ್ರಿಲ್ 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಅವರ ಉಪಸ್ಥಿಯಲ್ಲಿ. ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೂರ್ವಭಾವಿ ಸಭೆಯು ಉಜಿರೆ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮ ಬಗ್ಗೆ ವಿವರಿಸಿದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಅಳದಂಗಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶೇಖರ್ ಕುಕ್ಕೆಡಿ, ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ನಮಿತಾ ಪೂಜಾರಿ, ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಬಾಲಕೃಷ್ಣ ಗೌಡ ಕೇರಿಮಾರ್, ಉದ್ಯಮಿ ಪ್ರವೀಣ್ ಹಳ್ಳಿಮನೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಕಾರ್ಯದರ್ಶಿ ರಜತ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝಿನತ್ ಉಜಿರೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸದಸ್ಯರು ಹನೀಫ್ ಉಜಿರೆ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್, ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ಪ. ಪಂಗಡ ಘಟಕದ ಅಧ್ಯಕ್ಷ ಜೀನಪ್ಪ ನಾಯ್ಕ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ, ನವೀನ್ ಗೌಡ ಸವಣಾಲು, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!