23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ ಹೈಸ್ಕೂಲ್ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ ಒಂಬತ್ತು ದಿನದ ಬೇಸಿಗೆ ಶಿಬಿರವನ್ನು ಎ.15 ರಿಂದ ಆಯೋಜಿಸಿದ್ದು, ಉದ್ಘಾಟನೆಯನ್ನು ಎಸ್.ಡಿ.ಯಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್ ಎನ್‌ ಕಾಕತ್ಕರ್‌ ನೆರವೇರಿಸಿದರು.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಯು ಪಠ್ಯ-ಪೂರಕ ಕಲಿಯುವಿಕೆಯಿಂದ ಫೂರ್ಣನಾಗುತ್ತಾನೆ. ಪಠ್ಯೇತರ ಚಟುವಟಿಕೆಗಳು ಮತ್ತು ಕೌಶಲ್ಯಾಭಿವೃದ್ಧಿಯಿಂದಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಿ ಪರಿಪೂರ್ಣನಾಗುತ್ತಾನೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನುಡಿದರು.


ಈ ಶಿಬಿರದಲ್ಲಿ ಕಂಪ್ಯೂಟರ್ ಅಸೆಂಬ್ಲಿಂಗ್,ಇಲೆಕ್ಟ್ರಾನಿಕ್ಸ್, ಸೌರಶಕ್ತಿ ಉತ್ಪಾದನೆ, ಮುಂತಾದ ತಂತ್ರಜ್ಞಾನ ವಿಷಯಗಳೊಂದಿಗೆ ಬೌದ್ಧಿಕ ಮತ್ತು ಕೌಶಲ್ಯಾಭಿವೃದ್ದಿ ವಿಷಯಗಳು, ಐಡಿಯಾ ಜನರೇಶನ್,ಪ್ರಾಜೆಕ್ಟ್ ತಯಾರಿ, ಕರ‍್ಯಕ್ರಮ ನಿರ್ವಹಣೆ, ಕ್ರೀಡೆ, ಯೋಗ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು ಎಂದು ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್‌ತಿಳಿಸಿದರು.

ಇಲೆಕ್ಟ್ರಾನಿಕ್ಸ್‌ವಿಭಾಗದ ಸಹ ಪ್ರಾದ್ಯಾಪಕ ರಾಧಾಕೃಷ್ಣ ಸ್ವಾಗತಿಸಿ, ಕಾರ‍್ಯಕ್ರಮ ಸಂಯೊಜಕ ಮಹೇಶ್‌ವಂದಿಸಿದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!