July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ ಹೈಸ್ಕೂಲ್ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ ಒಂಬತ್ತು ದಿನದ ಬೇಸಿಗೆ ಶಿಬಿರವನ್ನು ಎ.15 ರಿಂದ ಆಯೋಜಿಸಿದ್ದು, ಉದ್ಘಾಟನೆಯನ್ನು ಎಸ್.ಡಿ.ಯಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್ ಎನ್‌ ಕಾಕತ್ಕರ್‌ ನೆರವೇರಿಸಿದರು.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಯು ಪಠ್ಯ-ಪೂರಕ ಕಲಿಯುವಿಕೆಯಿಂದ ಫೂರ್ಣನಾಗುತ್ತಾನೆ. ಪಠ್ಯೇತರ ಚಟುವಟಿಕೆಗಳು ಮತ್ತು ಕೌಶಲ್ಯಾಭಿವೃದ್ಧಿಯಿಂದಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಿ ಪರಿಪೂರ್ಣನಾಗುತ್ತಾನೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನುಡಿದರು.


ಈ ಶಿಬಿರದಲ್ಲಿ ಕಂಪ್ಯೂಟರ್ ಅಸೆಂಬ್ಲಿಂಗ್,ಇಲೆಕ್ಟ್ರಾನಿಕ್ಸ್, ಸೌರಶಕ್ತಿ ಉತ್ಪಾದನೆ, ಮುಂತಾದ ತಂತ್ರಜ್ಞಾನ ವಿಷಯಗಳೊಂದಿಗೆ ಬೌದ್ಧಿಕ ಮತ್ತು ಕೌಶಲ್ಯಾಭಿವೃದ್ದಿ ವಿಷಯಗಳು, ಐಡಿಯಾ ಜನರೇಶನ್,ಪ್ರಾಜೆಕ್ಟ್ ತಯಾರಿ, ಕರ‍್ಯಕ್ರಮ ನಿರ್ವಹಣೆ, ಕ್ರೀಡೆ, ಯೋಗ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು ಎಂದು ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್‌ತಿಳಿಸಿದರು.

ಇಲೆಕ್ಟ್ರಾನಿಕ್ಸ್‌ವಿಭಾಗದ ಸಹ ಪ್ರಾದ್ಯಾಪಕ ರಾಧಾಕೃಷ್ಣ ಸ್ವಾಗತಿಸಿ, ಕಾರ‍್ಯಕ್ರಮ ಸಂಯೊಜಕ ಮಹೇಶ್‌ವಂದಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ಮಾಸಿಕ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!