37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ ಹೈಸ್ಕೂಲ್ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ ಒಂಬತ್ತು ದಿನದ ಬೇಸಿಗೆ ಶಿಬಿರವನ್ನು ಎ.15 ರಿಂದ ಆಯೋಜಿಸಿದ್ದು, ಉದ್ಘಾಟನೆಯನ್ನು ಎಸ್.ಡಿ.ಯಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್ ಎನ್‌ ಕಾಕತ್ಕರ್‌ ನೆರವೇರಿಸಿದರು.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಯು ಪಠ್ಯ-ಪೂರಕ ಕಲಿಯುವಿಕೆಯಿಂದ ಫೂರ್ಣನಾಗುತ್ತಾನೆ. ಪಠ್ಯೇತರ ಚಟುವಟಿಕೆಗಳು ಮತ್ತು ಕೌಶಲ್ಯಾಭಿವೃದ್ಧಿಯಿಂದಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಿ ಪರಿಪೂರ್ಣನಾಗುತ್ತಾನೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನುಡಿದರು.


ಈ ಶಿಬಿರದಲ್ಲಿ ಕಂಪ್ಯೂಟರ್ ಅಸೆಂಬ್ಲಿಂಗ್,ಇಲೆಕ್ಟ್ರಾನಿಕ್ಸ್, ಸೌರಶಕ್ತಿ ಉತ್ಪಾದನೆ, ಮುಂತಾದ ತಂತ್ರಜ್ಞಾನ ವಿಷಯಗಳೊಂದಿಗೆ ಬೌದ್ಧಿಕ ಮತ್ತು ಕೌಶಲ್ಯಾಭಿವೃದ್ದಿ ವಿಷಯಗಳು, ಐಡಿಯಾ ಜನರೇಶನ್,ಪ್ರಾಜೆಕ್ಟ್ ತಯಾರಿ, ಕರ‍್ಯಕ್ರಮ ನಿರ್ವಹಣೆ, ಕ್ರೀಡೆ, ಯೋಗ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು ಎಂದು ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್‌ತಿಳಿಸಿದರು.

ಇಲೆಕ್ಟ್ರಾನಿಕ್ಸ್‌ವಿಭಾಗದ ಸಹ ಪ್ರಾದ್ಯಾಪಕ ರಾಧಾಕೃಷ್ಣ ಸ್ವಾಗತಿಸಿ, ಕಾರ‍್ಯಕ್ರಮ ಸಂಯೊಜಕ ಮಹೇಶ್‌ವಂದಿಸಿದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya
error: Content is protected !!