September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ ಹೈಸ್ಕೂಲ್ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ ಒಂಬತ್ತು ದಿನದ ಬೇಸಿಗೆ ಶಿಬಿರವನ್ನು ಎ.15 ರಿಂದ ಆಯೋಜಿಸಿದ್ದು, ಉದ್ಘಾಟನೆಯನ್ನು ಎಸ್.ಡಿ.ಯಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್ ಎನ್‌ ಕಾಕತ್ಕರ್‌ ನೆರವೇರಿಸಿದರು.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಯು ಪಠ್ಯ-ಪೂರಕ ಕಲಿಯುವಿಕೆಯಿಂದ ಫೂರ್ಣನಾಗುತ್ತಾನೆ. ಪಠ್ಯೇತರ ಚಟುವಟಿಕೆಗಳು ಮತ್ತು ಕೌಶಲ್ಯಾಭಿವೃದ್ಧಿಯಿಂದಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಿ ಪರಿಪೂರ್ಣನಾಗುತ್ತಾನೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನುಡಿದರು.


ಈ ಶಿಬಿರದಲ್ಲಿ ಕಂಪ್ಯೂಟರ್ ಅಸೆಂಬ್ಲಿಂಗ್,ಇಲೆಕ್ಟ್ರಾನಿಕ್ಸ್, ಸೌರಶಕ್ತಿ ಉತ್ಪಾದನೆ, ಮುಂತಾದ ತಂತ್ರಜ್ಞಾನ ವಿಷಯಗಳೊಂದಿಗೆ ಬೌದ್ಧಿಕ ಮತ್ತು ಕೌಶಲ್ಯಾಭಿವೃದ್ದಿ ವಿಷಯಗಳು, ಐಡಿಯಾ ಜನರೇಶನ್,ಪ್ರಾಜೆಕ್ಟ್ ತಯಾರಿ, ಕರ‍್ಯಕ್ರಮ ನಿರ್ವಹಣೆ, ಕ್ರೀಡೆ, ಯೋಗ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು ಎಂದು ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್‌ತಿಳಿಸಿದರು.

ಇಲೆಕ್ಟ್ರಾನಿಕ್ಸ್‌ವಿಭಾಗದ ಸಹ ಪ್ರಾದ್ಯಾಪಕ ರಾಧಾಕೃಷ್ಣ ಸ್ವಾಗತಿಸಿ, ಕಾರ‍್ಯಕ್ರಮ ಸಂಯೊಜಕ ಮಹೇಶ್‌ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya
error: Content is protected !!