23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

ಗುರುವಾಯನಕೆರೆ: ಭಗವಾನ್ ಶ್ರೀ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಇದರ ಪಂಚಕಲ್ಯಾಣದ ಪ್ರಯುಕ್ತ ಕಾರ್ಮಣ್ಣು ಕುಟುಂಬದವರ ಪ್ರಾಯೋಜಕತ್ಚದಲ್ಲಿ ನಿರ್ಮಾಣಗೊಂಡ, ಶ್ರೀಮತಿ ಕಾವ್ಯಶ್ರೀ ಆಜೇರು ಇವರು ಹಾಡಿರುವ “ಮಲೆನಾಡ ಮಡಿಲಿನಲ್ಲಿ. . .” ಎಂಬ ಜಿನಭಕ್ತಿಗೀತೆಯನ್ನು, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಜೈನ್ ಇವರ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಂದರ್ಭದಲ್ಲಿ ಸುಮಂತ್, ಶ್ರೀಮತಿ ಶ್ವೇತಾ ಹಾಗೂ ಶ್ರೀ ಮಲ್ಲಿನಾಥ ಜೈನ್ ಇವರನ್ನು ಗೌರವಿಸಲಾಯಿತು. ಶ್ರೀಮತಿ ಶ್ವೇತಾ ದಿಲೀಪ್ ಇವರ ಸಾಹಿತ್ಯಕ್ಕೆ, ಹಿಮ್ಮೇಳದಲ್ಲಿ ಮದ್ದಳೆಯಲ್ಲಿ ಶ್ರೀ ಜನಾರ್ಧನ ತೋಳ್ಪಾಡಿತ್ತಾಯ, ಚೆಂಡೆಯಲ್ಲಿ ಚಂದ್ರಶೇಖರ, ರೆಕಾರ್ಡಿಂಗ್ ನಲ್ಲಿ ಸೌಂಡ್ ಟ್ರಾಕ್ ಕಲ್ಲಡ್ಕ ಇವರು ಸಹಕರಿಸಿದರು. ಶ್ರೀ ಬಿ. ಭುಜಬಲಿ ಧರ್ಮಸ್ಥಳ ಇವರು ಕಾರ್ಯಕ್ರಮವನ್ನು ಹಾಗೂ ಹಾಡುಗಳನ್ನು ಸಂಯೋಜಿಸಿದರು.


ಶ್ರೀ ಮಲ್ಲಿನಾಥ್ ಜೈನ್, ಶ್ರೀ ಧರ್ಮರಾಜ್ ಧರ್ಮಸ್ಥಳ, ಎಕ್ಸೆಲ್ ನ ಶ್ರೀ ಶಾಂತಿನಾಥ್ ಜೈನ್, ಪ್ರಾಚಾರ್ಯರು, ವಿದ್ಯಾ ರ್ಥಿನಿಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು . ಶ್ರೀಯುತ ಮಲ್ಲಿನಾಥ್ ಜೈನ್ ಅವರು ಕಾರ್ಯಕ್ರಮ ನಿರೂಪಿಸಿದರು . ಶ್ರೀ ಪ್ರಕಾಶ್ ಇವರು ಸಹಕರಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya
error: Content is protected !!