23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ ಹೈಸ್ಕೂಲ್ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ ಒಂಬತ್ತು ದಿನದ ಬೇಸಿಗೆ ಶಿಬಿರವನ್ನು ಎ.15 ರಿಂದ ಆಯೋಜಿಸಿದ್ದು, ಉದ್ಘಾಟನೆಯನ್ನು ಎಸ್.ಡಿ.ಯಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್ ಎನ್‌ ಕಾಕತ್ಕರ್‌ ನೆರವೇರಿಸಿದರು.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಯು ಪಠ್ಯ-ಪೂರಕ ಕಲಿಯುವಿಕೆಯಿಂದ ಫೂರ್ಣನಾಗುತ್ತಾನೆ. ಪಠ್ಯೇತರ ಚಟುವಟಿಕೆಗಳು ಮತ್ತು ಕೌಶಲ್ಯಾಭಿವೃದ್ಧಿಯಿಂದಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಿ ಪರಿಪೂರ್ಣನಾಗುತ್ತಾನೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನುಡಿದರು.


ಈ ಶಿಬಿರದಲ್ಲಿ ಕಂಪ್ಯೂಟರ್ ಅಸೆಂಬ್ಲಿಂಗ್,ಇಲೆಕ್ಟ್ರಾನಿಕ್ಸ್, ಸೌರಶಕ್ತಿ ಉತ್ಪಾದನೆ, ಮುಂತಾದ ತಂತ್ರಜ್ಞಾನ ವಿಷಯಗಳೊಂದಿಗೆ ಬೌದ್ಧಿಕ ಮತ್ತು ಕೌಶಲ್ಯಾಭಿವೃದ್ದಿ ವಿಷಯಗಳು, ಐಡಿಯಾ ಜನರೇಶನ್,ಪ್ರಾಜೆಕ್ಟ್ ತಯಾರಿ, ಕರ‍್ಯಕ್ರಮ ನಿರ್ವಹಣೆ, ಕ್ರೀಡೆ, ಯೋಗ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು ಎಂದು ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್‌ತಿಳಿಸಿದರು.

ಇಲೆಕ್ಟ್ರಾನಿಕ್ಸ್‌ವಿಭಾಗದ ಸಹ ಪ್ರಾದ್ಯಾಪಕ ರಾಧಾಕೃಷ್ಣ ಸ್ವಾಗತಿಸಿ, ಕಾರ‍್ಯಕ್ರಮ ಸಂಯೊಜಕ ಮಹೇಶ್‌ವಂದಿಸಿದರು.

Related posts

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya
error: Content is protected !!