25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ ಹೈಸ್ಕೂಲ್ ಮಟ್ಟದ ಶಾಲಾ ವಿದ್ಯಾರ್ಥಿಗಳಿಗೆ ಒಂಬತ್ತು ದಿನದ ಬೇಸಿಗೆ ಶಿಬಿರವನ್ನು ಎ.15 ರಿಂದ ಆಯೋಜಿಸಿದ್ದು, ಉದ್ಘಾಟನೆಯನ್ನು ಎಸ್.ಡಿ.ಯಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್ ಎನ್‌ ಕಾಕತ್ಕರ್‌ ನೆರವೇರಿಸಿದರು.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಯು ಪಠ್ಯ-ಪೂರಕ ಕಲಿಯುವಿಕೆಯಿಂದ ಫೂರ್ಣನಾಗುತ್ತಾನೆ. ಪಠ್ಯೇತರ ಚಟುವಟಿಕೆಗಳು ಮತ್ತು ಕೌಶಲ್ಯಾಭಿವೃದ್ಧಿಯಿಂದಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಾಗಿ ಪರಿಪೂರ್ಣನಾಗುತ್ತಾನೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನುಡಿದರು.


ಈ ಶಿಬಿರದಲ್ಲಿ ಕಂಪ್ಯೂಟರ್ ಅಸೆಂಬ್ಲಿಂಗ್,ಇಲೆಕ್ಟ್ರಾನಿಕ್ಸ್, ಸೌರಶಕ್ತಿ ಉತ್ಪಾದನೆ, ಮುಂತಾದ ತಂತ್ರಜ್ಞಾನ ವಿಷಯಗಳೊಂದಿಗೆ ಬೌದ್ಧಿಕ ಮತ್ತು ಕೌಶಲ್ಯಾಭಿವೃದ್ದಿ ವಿಷಯಗಳು, ಐಡಿಯಾ ಜನರೇಶನ್,ಪ್ರಾಜೆಕ್ಟ್ ತಯಾರಿ, ಕರ‍್ಯಕ್ರಮ ನಿರ್ವಹಣೆ, ಕ್ರೀಡೆ, ಯೋಗ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು ಎಂದು ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್‌ತಿಳಿಸಿದರು.

ಇಲೆಕ್ಟ್ರಾನಿಕ್ಸ್‌ವಿಭಾಗದ ಸಹ ಪ್ರಾದ್ಯಾಪಕ ರಾಧಾಕೃಷ್ಣ ಸ್ವಾಗತಿಸಿ, ಕಾರ‍್ಯಕ್ರಮ ಸಂಯೊಜಕ ಮಹೇಶ್‌ವಂದಿಸಿದರು.

Related posts

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
error: Content is protected !!