23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

ಗುರುವಾಯನಕೆರೆ: ಭಗವಾನ್ ಶ್ರೀ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಇದರ ಪಂಚಕಲ್ಯಾಣದ ಪ್ರಯುಕ್ತ ಕಾರ್ಮಣ್ಣು ಕುಟುಂಬದವರ ಪ್ರಾಯೋಜಕತ್ಚದಲ್ಲಿ ನಿರ್ಮಾಣಗೊಂಡ, ಶ್ರೀಮತಿ ಕಾವ್ಯಶ್ರೀ ಆಜೇರು ಇವರು ಹಾಡಿರುವ “ಮಲೆನಾಡ ಮಡಿಲಿನಲ್ಲಿ. . .” ಎಂಬ ಜಿನಭಕ್ತಿಗೀತೆಯನ್ನು, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಜೈನ್ ಇವರ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಂದರ್ಭದಲ್ಲಿ ಸುಮಂತ್, ಶ್ರೀಮತಿ ಶ್ವೇತಾ ಹಾಗೂ ಶ್ರೀ ಮಲ್ಲಿನಾಥ ಜೈನ್ ಇವರನ್ನು ಗೌರವಿಸಲಾಯಿತು. ಶ್ರೀಮತಿ ಶ್ವೇತಾ ದಿಲೀಪ್ ಇವರ ಸಾಹಿತ್ಯಕ್ಕೆ, ಹಿಮ್ಮೇಳದಲ್ಲಿ ಮದ್ದಳೆಯಲ್ಲಿ ಶ್ರೀ ಜನಾರ್ಧನ ತೋಳ್ಪಾಡಿತ್ತಾಯ, ಚೆಂಡೆಯಲ್ಲಿ ಚಂದ್ರಶೇಖರ, ರೆಕಾರ್ಡಿಂಗ್ ನಲ್ಲಿ ಸೌಂಡ್ ಟ್ರಾಕ್ ಕಲ್ಲಡ್ಕ ಇವರು ಸಹಕರಿಸಿದರು. ಶ್ರೀ ಬಿ. ಭುಜಬಲಿ ಧರ್ಮಸ್ಥಳ ಇವರು ಕಾರ್ಯಕ್ರಮವನ್ನು ಹಾಗೂ ಹಾಡುಗಳನ್ನು ಸಂಯೋಜಿಸಿದರು.


ಶ್ರೀ ಮಲ್ಲಿನಾಥ್ ಜೈನ್, ಶ್ರೀ ಧರ್ಮರಾಜ್ ಧರ್ಮಸ್ಥಳ, ಎಕ್ಸೆಲ್ ನ ಶ್ರೀ ಶಾಂತಿನಾಥ್ ಜೈನ್, ಪ್ರಾಚಾರ್ಯರು, ವಿದ್ಯಾ ರ್ಥಿನಿಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು . ಶ್ರೀಯುತ ಮಲ್ಲಿನಾಥ್ ಜೈನ್ ಅವರು ಕಾರ್ಯಕ್ರಮ ನಿರೂಪಿಸಿದರು . ಶ್ರೀ ಪ್ರಕಾಶ್ ಇವರು ಸಹಕರಿಸಿದರು.

Related posts

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!