23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!