22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!