24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya
error: Content is protected !!