23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya
error: Content is protected !!