September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya
error: Content is protected !!