July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya
error: Content is protected !!