April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya
error: Content is protected !!