July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಕೊಕ್ಕಡ: ಸಮಾಜದಲ್ಲಿ ಶಿಕ್ಷಣವಂತರು ಅನೇಕರು ಇರಬಹುದು ಆದರೆ ಸಂಸ್ಕಾರವAತರು ಸಿಗುವುದು ವಿರಳ. ಶ್ರೀರಾಮ ವಿದ್ಯಾಸಂಸ್ಥೆಯಂತಹ ಸಂಸ್ಥೆಗಳು ಮಕ್ಕಳನ್ನು ಸಂಸ್ಕಾರಯುಕ್ತ ಮಕ್ಕಳಾಗಿ ಪರಿವರ್ತಿಸುತ್ತಿರುವುದು ಶ್ಲಾಘನೀಯ ಎಂದು ಬೆಳ್ತಂಗಡಿ ಸಂಸ್ಕಾರ ಭಾರತೀಯ ಅಧ್ಯಕ್ಷ ಸಂಪತ್ ಬಿ. ಸುವರ್ಣ ಏ.14 ರಂದು ಕೊಕ್ಕಡ ಸೇವಾ ಮಂದಿರದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಹಾಗೂ ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು ಸಹಯೋಗದಲ್ಲಿ ಐದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಬೇಸಿಗೆ ಶಿಬಿರದ ಸಮಾರೋಪ ಭಾಷಣ ಮಾಡಿದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಮನೋಜ್, ಪೋಷಕರಿಂದು ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗಿ ಮಕ್ಕಳು ತಮ್ಮ ಮಾತೃಭಾಷೆಯನ್ನೇ ಮರೆಯುವಂತೆ ಮಾಡುತ್ತಿದ್ದಾರೆ. ತಮ್ಮ ಶ್ರಮ ಹಾಗೂ ತಾವು ಪಡುವ ಕಷ್ಟ ಮಕ್ಕಳಿಗೆ ಗೊತ್ತಾಗಬಾರದು ಎನ್ನುವ ಪ್ರೀತಿಯಲ್ಲಿ ಪೋಷಕರಿಂದ ಮಕ್ಕಳನ್ನು ಬೆಳೆಸುತ್ತಿದ್ದು, ಮಕ್ಕಳಿಗೆ ಕಷ್ಟದ ಅರಿವೇ ಇಲ್ಲದಂತಾಗಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಕಾರ್ಯದರ್ಶಿ ಕುಶಾಲಪ್ಪ ಗೌಡ ಪೂವಾಜೆ ವಹಿಸಿದ್ದರು.
ಈ ಸಂದರ್ಭ ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಬಳಿಕ ಶಿಬಿರದಲ್ಲಿ ಸಹಕರಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಎಲ್ಲ ಶಿಕ್ಷಕ ಶಿಕ್ಷಕಿಯರಿಗೂ ಗೌರವಾರ್ಪಣೆ ಸಲ್ಲಿಸಲಾಯಿತು. ಶ್ರೀ ರಾಮ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ನೈಮಿಷ ಸ್ವಾಗತಿಸಿ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿಟ್ಟಿಲು ಪ್ರಾಸ್ತಾವಿಕವಾಗಿ ನುಡಿದರು. ಶ್ರೀರಾಮ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೇಟ್ ವಂದಿಸಿದರು. ಶಿಬಿರಾರ್ಥಿ ಯೋಕ್ಷ ವೈಯಕ್ತಿಕ ಗೀತೆ ಹಾಡಿದರು. ಕೇಶವ ಹಳ್ಳಿಂಗೇರಿ ಕಾರ್ಯಕ್ರಮ ನಿರೂಪಿಸಿದರು.


ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೇಟ್ ಮಾರ್ಗದರ್ಶನದಂತೆ ಶಿಬಿರ ಸಂಚಾಲಕರಾಗಿ ಸ್ವಾತಿ ಕೆ.ವಿ, ಸುಪ್ರೀತಾ ಎ, ಶ್ವೇತ ಕುಮಾರಿ ಎಂ. ಪಿ, ಭವ್ಯ ಪಿ. ಡಿ, ಶುಭಲಕ್ಷ್ಮಿ ಜವಾಬ್ದಾರಿ ನಿರ್ವಹಿಸಿದರು.

Related posts

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!