23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏ. 20 ರಂದು ಕೆಪಿಸಿಸಿ ಅಧ್ಯಕ್ಷರು ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ತಾತ್ಕಾಲಿಕ ಚಪ್ಪರಕ್ಕೆ ಮಹೂರ್ತ ನೆರವೇರಿಸಲಾಯಿತು.


ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಅನಂತ ಇರ್ವತ್ರಾಯ ಅವರು ಪೂಜಾ ವಿಧಿ-ವಿಧಾನ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತೀಶ್ ಕೆ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ ಕುಕ್ಕೇಡಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಗೋಪಿನಾಥ್ ನಾಯಕ್ ಕುವೆಟ್ಟು, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಓಡಿಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರ್, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಬಿ. ಕಳಿಯ, ಪಕ್ಷದ ಪ್ರಮುಖರಾದ ಪ್ರವೀಣ್ ಹಳ್ಳಿಮನೆ, ಅಬ್ದುಲ್ ಸಲೀಂ ಮರೋಡಿ, ನಾರಾಯಣ ಗೌಡ ದೇವಸ್ಯ, ಮಹಮದ್ ಹನೀಫ್ ಉಜಿರೆ, ವೀರೇಂದ್ರ ಕುಮಾರ್ ಜೈನ್ ನಾವರ, ರವೀಂದ್ರ ಅಮೀನ್ ಬಳೆಂಜ, ಧನಂಜಯ್ ರಾವ್, ನವೀನ ಗೌಡ ಸವಣಾಲು, ಅಜರ್ ನಾವೂರು, ಅರುಣ್ ಲೋಬೋ, ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಸಚಿನ್ ಕುಮಾರ್ ನೂಜೋಡಿ, ರಜತ್ ಗೌಡ ಉಜಿರೆ, ಮಹಮ್ಮದ್ ಶರೀಫ್ ಸಬರಬೈಲು, ಉಮೇರಾ ಬಾನು, ಸದಾನಂದ ನಾಲ್ಕೂರು, ವಿನಯ್ ಸೋಣಂದೂರು, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya
error: Content is protected !!