25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

ಅರಸಿನಮಕ್ಕಿ : ಸಂಸ್ಕಾರ ಸಿಗದ ಮಕ್ಕಳು ಮನೆಮಂದಿಗೆ ಮಾತ್ರವಲ್ಲದೆ ಸಮಾಜಕ್ಕೂ ಹೊರೆಯಾಗುತ್ತಾರೆ. ಮಕ್ಕಳಿಗೆ ಬಾಲ್ಯದಿಂದಲೆ ಸಂಸ್ಕಾರ ನೀಡಿ ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿಹೇಳಬೇಕು ಎಂದು ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಪ್ರಾ.ಶಾಲೆಯ ಸಂಚಾಲಕರಾದ ವಾಮನ ತಾಮ್ಹನ್‌ಕರ್ ಹೇಳಿದರು.


ಅವರು ಎ.13 ರಂದು ಅರಸಿನಮಕ್ಕಿಯಲ್ಲಿ ನವ ಭಾರತ ಸಂಘಟನೆಯ ಆಶ್ರಯದಲ್ಲಿ ನಡೆದ ನಾಲ್ಕು ದಿನಗಳ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಶಿಬಿರವನ್ನು ಆಯೋಜಿಸುವಲ್ಲಿ ಶ್ರಮಿಸಿದ ಸಂಘಟನೆಯ ಕಾರ್ಯಕರ್ತರನ್ನು ಶ್ಲಾಘಿಸಿದ ಅವರು ಪ್ರತಿ ತಿಂಗಳು ಇಂತಹ ಕನಿಷ್ಟ ಒಂದು ದಿನದ ಶಿಬಿರವನ್ನು ಮಾಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಬೌದ್ಧಿಕ್ ನೀಡಿದ ನಿವೇದಿತಾ ಮಾತಾಜಿಯವರು, ಮಕ್ಕಳು ಮನೆಯಲ್ಲಿರುವ ಹೆತ್ತವರ ನಡವಳಿಕೆಯನ್ನು ಗಮನಿಸುತ್ತಾರೆ, ಅವರನ್ನೇ ಅನುಸರಿಸುತ್ತಾರೆ. ಪೋಷಕರಲ್ಲಿ ಸಂಸ್ಕಾರದ ಕೊರತೆಯಿದ್ದರೆ ಮಕ್ಕಳೂ ಅದೇ ಹಾದಿ ಹಿಡಿಯುತ್ತಾರೆ. ಆದ್ದರಿಂದ ಸಂಸ್ಕಾರ ಮನೆಯಿಂದಲೆ ಸಿಗಬೇಕು. ಸಂಸ್ಕಾರ ದೊರೆತ ಮಗು ಸಮಾಜದ, ದೇಶದ ಆಸ್ತಿಯಾಗುತ್ತದೆ ಎಂದರು.


ಅತಿಥಿಗಳಾಗಿ ಭಾಗವಹಿಸಿದ ವಿಶ್ವ ಹಿಂದು ಪರಿಷತ್‌ನ ಜಿಲ್ಲಾ ಮುಖಂಡ ನವೀನ್ ನೆರಿಯ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ದಾನಿ ಸುಂದರ ರಾಣ್ಯ ಶುಭಹಾರೈಸಿದರು. ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ಅಧ್ಯಕ್ಷತೆ ವಹಿಸಿದ್ದರು. ಶ್ರೀರಂಗ ದಾಮ್ಲೆ, ಆರೆಸ್ಸೆಸ್ ಸ್ವಯಂಸೇವಕ ಯೋಗೀಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಹತ್ಯಡ್ಕ ಗ್ರಾಮದ ಬೂಡುಮುಗೇರಿನ ಅನಾರೋಗ್ಯ ಪೀಡಿತೆ ರತ್ನಾರವರಿಗೆ ಸಂಗ್ರಹಿಸಿ ನೀಡಿದ ಧನಸಹಾಯವನ್ನು ಹಸ್ತಾಂತರಿಸಲಾಯಿತು. ಶಿಬಿರಾರ್ಥಿಗಳು ಅನಿಸಿಕೆ ಹಂಚಿಕೊಂಡರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.


ಶ್ರೀನಿಧಿ ಜನಸೇವಾಕೇಂದ್ರದ ಮಾಲಕ ಗಣೇಶ್ ಹೊಸ್ತೋಟ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮಾಲತಿ ಮಾತಾಜಿ ವಂದಿಸಿದರು. ಸುಮಾ ಸಂಜಯ್ ಮಾತಾಜಿ ಕಾರ್ಯಕ್ರಮ ನಿರ್ವಹಿಸಿದರು. ದಾನಿಗಳು, ನವಭಾರತ ಸಂಘಟನೆಯ ಸದಸ್ಯರು ಸಹಕರಿಸಿದರು.
ಶಿಬಿರದಲ್ಲಿ ಹತ್ಯಡ್ಕ, ಶಿಶಿಲ, ಶಿಬಾಜೆ, ರೆಖ್ಯ ಗ್ರಾಮದ 172 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya
error: Content is protected !!