25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya
error: Content is protected !!