25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿತ್ತು. ಆದರೆ ಇದೀಗ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ.ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related posts

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya
error: Content is protected !!