25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

ಗುರುವಾಯನಕೆರೆ: ಇಲ್ಲಿಯ ವಿದ್ವತ್ ಪಿಯು ಕಾಲೇಜಿನಲ್ಲಿ ಎ.17ರಂದು ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಹತ್ತನೇ ತರಗತಿ ಪರೀಕ್ಷೆ ಬರೆದು ಮುಂದಿನ ಪಿಯು ಶಿಕ್ಷಣಕ್ಕಾಗಿ ಮಹದಾಸೆಯನ್ನಿಟ್ಟುಕೊಂಡಿರುವ ನೀಟ್/ ಜೆಇಇ / ಸಿಇಟಿ ಮುಂತಾದ ಆಕಾಂಕ್ಷಿಗಳು ಈ ವಿದ್ವತ್ ಪ್ರೇರಣಾ ಕೋಚಿಂಗ್ ಗೆ ನೊಂದಾಯಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಅಂಗವಾಗಿ, ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ ಅವರು ವಿದ್ಯಾರ್ಥಿಗಳು ಪಿಯು ಕಾಲೇಜು ಅಭ್ಯಾಸದ ಸಮಯದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಎಚ್ಚರಿಕೆಯಿಂದ ತಯಾರಿ ಆರಂಭಿಸಬೇಕು ಎಂಬುದರ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಜ್ವಲ ಮಾರ್ಗದರ್ಶನ ನೀಡಿದರು.

ಪಿಯು ನಂತರ ವಿದ್ಯಾರ್ಥಿಗಳಿಗೆ ಲಭ್ಯವಿರುವ 27 ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡುವ ಮೂಲಕ, ಅವರು ಸ್ಪರ್ಧಾತ್ಮಕ ಜಗತ್ತಿನ ಬಾಗಿಲು ತೆರೆದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ಪ್ರದೀಪ್ ನಾವೂರ್ ಅವರು ವಿದ್ಯಾರ್ಥಿಗಳಿಗೆ ಉತ್ಸಾಹದ ಸಂದೇಶವನ್ನು ನೀಡುತ್ತಾ, ಸಾಧನೆಯ ಹಾದಿಯಲ್ಲಿ ಬರುವ ಸವಾಲುಗಳನ್ನು ಸ್ವೀಕರಿಸುವ ಬಗೆ ಹಾಗೂ ಆತ್ಮಶಕ್ತಿಯನ್ನು ವೃದ್ಧಿಸಿಕೊಳ್ಳುವ ಬಗೆಗಳನ್ನು ಮನಮುಟ್ಟುವಂತೆ ತಿಳಿಸಿ, ಆಕಾಂಕ್ಷಿಗಳ ಭವಿಷ್ಯಕ್ಕೆ ಶುಭಕೋರಿದರು.

ಅಧ್ಯಕ್ಷೀಯ ನುಡಿಗಳನ್ನು ಹಂಚಿಕೊಂಡ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿಯವರು, ವಿದ್ವತ್ ಪ್ರೇರಣಾ ಕ್ಲಾಸ್ ಕನೆಕ್ಟ್ ನ ಮಹತ್ವವನ್ನು ವಿವರಿಸುತ್ತಾ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮುನ್ನಡೆಗೆ ಹೇಗೆ ಸಹಾಯಕ ಎಂಬುದನ್ನು ತಿಳಿಸಿದರು.ಸಮಾರಂಭದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಜ್ವಲ್ ರೈ, ಹಿರಿಯ ಸಲಹೆಗಾರರಾದ ಶ ರಾಧಾಕೃಷ್ಣ ರೈ ಹಾಗೂ ವಿದ್ವತ್ ಪಿಯು ಕಾಲೇಜಿನ ಉಪನ್ಯಾಸಕರ ತಂಡ ಹಾಗೂ ರಾಜ್ಯದ ಎಲ್ಲೆಡೆಯಿಂದ ಬಂದಂತಹ ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!