25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

ಉಜಿರೆ: ದೇಹಕ್ಕೆ ಮತ್ತು ಮನಸ್ಸಿಗೆ ಆರೋಗ್ಯ ಕೊಡುವ ಸಾಧನವೇ ಯೋಗ. ಮಾನಸಿಕ ಹಾಗೂ ದೈಹಿಕ ಸ್ವಸ್ಥತೆ ಶಿಕ್ಷಕರಿಗೆ ಮುಖ್ಯ. ಪಠ್ಯಕ್ರಮದ ಭಾಗವಾಗಿ ಯೋಗವನ್ನು ಕಲಿಯುವುದು ಮಾತ್ರವಲ್ಲದೇ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದು ಉಜಿರೆಯ ಪ್ರಕೃತಿ ಮತ್ತು ಯೋಗ ವಿಜ್ಞಾನ ವಿದ್ಯಾಲಯದ ಡೀನ್ ಡಾ. ಶಿವಪ್ರಸಾದ್ ಇವರು ಎಸ್.ಡಿ.ಎಮ್. ಬಿ.ಎಡ್ ಕಾಲೇಜಿನಲ್ಲಿ ನಡೆದ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.


ಶಿಕ್ಷಕರಿಗೆ ನಾಟಕ ಮತ್ತು ರಂಗಭೂಮಿಯ ಪರಿಚಯದೊಂದಿಗೆ ಅದನ್ನು ಬಳಸುವ ಕೌಶಲವಿರುವ ವಾತಾವರಣ ಸಿಕ್ಕಿರುವುದು ನಿಮ್ಮ ಅದೃಷ್ಟ. ಹಾಗಾಗಿ ಅದನ್ನು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಎಸ್. ಡಿ. ಎಮ್. ಕಾಲೇಜಿನ ರಂಗ ತರಬೇತಿಯ ನಿರ್ದೇಶಕ ಯಶವಂತ ಬೆಳ್ತಂಗಡಿ ಅತಿಥಿಯಾಗಿ ಆಗಮಿಸಿ ಮಾತನಾಡಿದರು.


ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಆಲ್ಬರ್ಟ್ ಸಲ್ಡಾನ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಸ್ವಸ್ಥ ದೇಹ, ಸ್ವಸ್ಥ ಮನಸ್ಸನ್ನು ನೀಡುವುದು ಯೋಗ. ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜನ್ನು ಯೋಗದ ವಿಶ್ವಗುರು ಎಂದು ಹೇಳಲಾಗುತ್ತಿದೆ ” ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ, ಎಲ್ಲಾ ಉಪನ್ಯಾಸಕ ವರ್ಗದವರು, ಪ್ರಥಮ ಮತ್ತು ದ್ವಿತೀಯ ಬಿ.ಇಡಿ. ಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ ಸ್ವಾಗತಿಸಿ, ಚೈತ್ಯನ್ಯ ಹಾಗೂ ಪ್ರತಿಮಾ ಅತಿಥಿಗಳನ್ನು ಪರಿಚಯಿಸಿ, ಮಲ್ಲಿಕಾರ್ಜುನ ಪಾಟೀಲ್ ವಂದಿಸಿ, ಅಕ್ಷಿತಾ ಎಂ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya
error: Content is protected !!