25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

ಬೆಳ್ತಂಗಡಿ : ಒಳ್ಳೆಯ ಚಟುವಟಿಕೆಗಳಿಂದ ಶಿಬಿರಾರ್ಥಿಗಳು ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕು. ವಿನೂತನ ರೀತಿಯ ಝೇಂಕಾರ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಕೀಲ,ಬಿಎಂಎಸ್ ಜಿಲ್ಲಾಧ್ಯಕ್ಷ ಯು ಅನಿಲ್ ಕುಮಾರ್ ಹೇಳಿದರು

ಅವರು ಬೆಳ್ತಂಗಡಿ ನಗರ ಪಂಚಾಯತ್ ಬಳಿಯ ಮಹಿಳಾ ವೃಂದದ ಸಭಾಂಗಣದಲ್ಲಿ ಎಂಟು ದಿನಗಳ ಕಾಲ ನಡೆಯುವ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ಕನ್ನಡಮ್ಮ ವಾರಪತ್ರಿಕೆಯ ಸ್ಥಾನೀಯ ಸಂಪಾದಕರಾದ ಮಂಜುಳಾ ಡಿ ಪ್ರಸಾದ್ ರವರು ವಹಿಸಿ ಮಾತನಾಡಿ ತಾಲೂಕಿನ ವಿವಿಧ ಮೂಲೆಗಳಿಂದ ಆಗಮಿಸಿದ ಮಕ್ಕಳು ಒಂದೇ ಸೂರಿನಡಿ ಸೇರಿ ಆನಂದಿಸುವ ಈ ಬೇಸಿಗೆ ಶಿಬಿರವು ಮಕ್ಕಳ ಕ್ರಿಯಾಶೀಲ ಚಿಂತನೆಗೆ ಅಡಿಪಾಯವಾಗುವುದರೊಂದಿಗೆ ರಜಾ ಸಮಯವನ್ನು ಉತ್ತಮ ರೀತಿಯಲ್ಲಿ ಕಳೆಯಲು ಉತ್ತಮ ಅವಕಾಶ ಎಂದು ಹೇಳಿದರು.

ಬೆಳ್ತಂಗಡಿ ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ಚಂದ್ರರವರು ಝೇಂಕಾರ ಬೇಸಿಗೆ ಶಿಬಿರದ ಅಚ್ಚುಕಟ್ಟುತನವನ್ನು ಶ್ಲಾಘಿಸಿ ಶುಭ ಕೋರಿದರು.

ಶಿಬಿರದ ಸಂಯೋಜಕಿ ಹೇಮಾವತಿ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕುಮಾರಿ ನವ್ಯಾ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ‌ಶಿಕ್ಷಕಿ ಹರಿಣಾಕ್ಷಿ ಕೆ ನಿರೂಪಿಸಿ ಧನ್ಯವಾದವಿತ್ತರು.ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿ ರಾಷ್ಟ್ರಮಟ್ಟದ ಕಲಾವಿದರಾದ ಸದಾಶಿವ ಶಿವಗಿರಿ ಕಲ್ಲಡ್ಕ ಶಿಬಿರದ ಚಟುವಟಿಕೆಗಳನ್ನು ನಡೆಸಿಕೊಟ್ಟರು.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya
error: Content is protected !!