29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

ಬೆಳ್ತಂಗಡಿ : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ಕೋಳಿ ಸಾಗಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಏ.18 ರಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು , ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ನೀರಿನ ಆಳದ ಅರಿವಿಲ್ಲದೆ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬನ್ನೂರು ಪೋಲಿಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೋಲಿಸರು ತಿಳಿಸಿದ್ದಾರೆ.

ಈತ ನಾವೂರು ಗ್ರಾಮದ ಕುದುರು ನಿವಾಸಿ ಹಮೀದ್ ಮತ್ತು ಮೈಮುನ ದಂಪತಿಗಳ ಪುತ್ರ. ಇವರು ಮೂರು ಮಕ್ಕಳಲ್ಲಿ ಓರ್ವ ಈ ಹಿಂದೆ ಮದ್ದಡ್ಕದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದೀಗ ಮನ್ಸೂರ್ ಅಗಲಿಕೆ ಕುಟುಂಬಕ್ಕೆ ಆಘಾತ ಉಂಟಾಗಿದೆ. ಮೃತ ಯುವಕ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Related posts

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!