26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

ಬೆಳ್ತಂಗಡಿ : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ಕೋಳಿ ಸಾಗಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಏ.18 ರಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು , ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ನೀರಿನ ಆಳದ ಅರಿವಿಲ್ಲದೆ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬನ್ನೂರು ಪೋಲಿಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೋಲಿಸರು ತಿಳಿಸಿದ್ದಾರೆ.

ಈತ ನಾವೂರು ಗ್ರಾಮದ ಕುದುರು ನಿವಾಸಿ ಹಮೀದ್ ಮತ್ತು ಮೈಮುನ ದಂಪತಿಗಳ ಪುತ್ರ. ಇವರು ಮೂರು ಮಕ್ಕಳಲ್ಲಿ ಓರ್ವ ಈ ಹಿಂದೆ ಮದ್ದಡ್ಕದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದೀಗ ಮನ್ಸೂರ್ ಅಗಲಿಕೆ ಕುಟುಂಬಕ್ಕೆ ಆಘಾತ ಉಂಟಾಗಿದೆ. ಮೃತ ಯುವಕ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Related posts

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!