25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏ. 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏ. 17ರಂದು ಶಿಶುಮಂದಿರದಲ್ಲಿ ನಡೆಯಿತು.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಉದಯ ಭಟ್ ಕೊಳಬ್ಬೆ ಸಭಾಧ್ಯಕ್ಷತೆ ವಹಿಸಿದ್ದರು. ಅಲೆಕ್ಕಿ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಎನ್, ಸಂಚಾಲಕರಾದ ಅಶೋಕ್ ಎನ್. ಉಪಸ್ಥಿತರಿದ್ದರು.

ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ನವೀನ್, ರಮೇಶ್, ಲಿಂಗಪ್ಪ, ಶ್ರೀಮತಿ ಮಾಲಿನಿ, ಶ್ರೀಮತಿ ವಿದ್ಯಾ ಕುಮಾರಿ, ಸ್ಪೂರ್ತಿ, ಕುಮಾರಿ ದಿಶಾ, ಶ್ರೀಮತಿ ಸರೋಜಿನಿ ಉಪಸ್ಥಿತರಿದ್ದರು.
ಗುರುವರ್ಯರಿಗೆ ಶ್ರೀರಾಮ ಸೇವಾ ಟ್ರಸ್ಟ್ ನ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.
65 ಚಿಣ್ಣರು ಪಾಲ್ಗೊoಡಿದ್ದ ಈ ಶಿಬಿರದಲ್ಲಿ ಸ್ಪೂರ್ತಿ ಯಕ್ಷಿಣಿ ಮಾಯಾ ಲೋಕದ ರಾಜು ಮಕ್ಕಳನ್ನು ಜಾದು ಲೋಕಕ್ಕೆ ಕೊಂಡೊಯ್ದು ರಂಜಿಸಿದರು. ಶ್ರೀರಾಮ ಶಿಶು ಮಂದಿರದ ಮಾತೆಯರು ಉಪಸ್ಥಿತರಿದ್ದರು.
ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ಯೋಗದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ ಕು. ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ರವರಿಗೆ ಸನ್ಮಾನ ಮಾಡಲಾಯಿತು. ಅವರು ಯೋಗಾಸನಗಳನ್ನು ಮಾಡಿ ಮಕ್ಕಳಿಗೆ ಉತ್ತೇಜನ ತುಂಬಿದರು.

ಶಿಬಿರದಲ್ಲಿ ಪೇಪರ್ ಕ್ರಾಫ್ಟ್, ಗೂಡುದೀಪ ತಯಾರಿ, ಕಸದಿಂದ ರಸ, ಬಾಟಲ್ ಪೇಂಟಿಂಗ್, ನೃತ್ಯ ತರಬೇತಿ, ಚಿತ್ರಕಲೆ, ವ್ಯಕ್ತಿತ್ವ ವಿಕಸನ, ಮೋಜಿನ ಆಟಗಳು, ಕುಣಿತ ಭಜನೆ, ಚಿಕ್ಕ ಪ್ರವಾಸ, ಬರವಣಿಗೆ ಅಭ್ಯಾಸ,ಏರೋಬಿಕ್ಸ್, ಯೋಗ, ಮಣ್ಣಿನ ಕರಕುಶಲ ತರಬೇತಿ ನಡೆಯಿತು.
ಶ್ರೀಮತಿ ರತ್ನಾವತಿ ಪ್ರಾರ್ಥನೆ ಸಲ್ಲಿಸಿ, ಶ್ರೀಮತಿ ಪುಷ್ಪಲತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!