September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

ಬೆಳ್ತಂಗಡಿ : ಒಳ್ಳೆಯ ಚಟುವಟಿಕೆಗಳಿಂದ ಶಿಬಿರಾರ್ಥಿಗಳು ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕು. ವಿನೂತನ ರೀತಿಯ ಝೇಂಕಾರ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಕೀಲ,ಬಿಎಂಎಸ್ ಜಿಲ್ಲಾಧ್ಯಕ್ಷ ಯು ಅನಿಲ್ ಕುಮಾರ್ ಹೇಳಿದರು

ಅವರು ಬೆಳ್ತಂಗಡಿ ನಗರ ಪಂಚಾಯತ್ ಬಳಿಯ ಮಹಿಳಾ ವೃಂದದ ಸಭಾಂಗಣದಲ್ಲಿ ಎಂಟು ದಿನಗಳ ಕಾಲ ನಡೆಯುವ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ಕನ್ನಡಮ್ಮ ವಾರಪತ್ರಿಕೆಯ ಸ್ಥಾನೀಯ ಸಂಪಾದಕರಾದ ಮಂಜುಳಾ ಡಿ ಪ್ರಸಾದ್ ರವರು ವಹಿಸಿ ಮಾತನಾಡಿ ತಾಲೂಕಿನ ವಿವಿಧ ಮೂಲೆಗಳಿಂದ ಆಗಮಿಸಿದ ಮಕ್ಕಳು ಒಂದೇ ಸೂರಿನಡಿ ಸೇರಿ ಆನಂದಿಸುವ ಈ ಬೇಸಿಗೆ ಶಿಬಿರವು ಮಕ್ಕಳ ಕ್ರಿಯಾಶೀಲ ಚಿಂತನೆಗೆ ಅಡಿಪಾಯವಾಗುವುದರೊಂದಿಗೆ ರಜಾ ಸಮಯವನ್ನು ಉತ್ತಮ ರೀತಿಯಲ್ಲಿ ಕಳೆಯಲು ಉತ್ತಮ ಅವಕಾಶ ಎಂದು ಹೇಳಿದರು.

ಬೆಳ್ತಂಗಡಿ ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ಚಂದ್ರರವರು ಝೇಂಕಾರ ಬೇಸಿಗೆ ಶಿಬಿರದ ಅಚ್ಚುಕಟ್ಟುತನವನ್ನು ಶ್ಲಾಘಿಸಿ ಶುಭ ಕೋರಿದರು.

ಶಿಬಿರದ ಸಂಯೋಜಕಿ ಹೇಮಾವತಿ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕುಮಾರಿ ನವ್ಯಾ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ‌ಶಿಕ್ಷಕಿ ಹರಿಣಾಕ್ಷಿ ಕೆ ನಿರೂಪಿಸಿ ಧನ್ಯವಾದವಿತ್ತರು.ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿ ರಾಷ್ಟ್ರಮಟ್ಟದ ಕಲಾವಿದರಾದ ಸದಾಶಿವ ಶಿವಗಿರಿ ಕಲ್ಲಡ್ಕ ಶಿಬಿರದ ಚಟುವಟಿಕೆಗಳನ್ನು ನಡೆಸಿಕೊಟ್ಟರು.

Related posts

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya
error: Content is protected !!