37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

ಬೆಳ್ತಂಗಡಿ : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ಕೋಳಿ ಸಾಗಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಏ.18 ರಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು , ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ನೀರಿನ ಆಳದ ಅರಿವಿಲ್ಲದೆ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬನ್ನೂರು ಪೋಲಿಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೋಲಿಸರು ತಿಳಿಸಿದ್ದಾರೆ.

ಈತ ನಾವೂರು ಗ್ರಾಮದ ಕುದುರು ನಿವಾಸಿ ಹಮೀದ್ ಮತ್ತು ಮೈಮುನ ದಂಪತಿಗಳ ಪುತ್ರ. ಇವರು ಮೂರು ಮಕ್ಕಳಲ್ಲಿ ಓರ್ವ ಈ ಹಿಂದೆ ಮದ್ದಡ್ಕದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದೀಗ ಮನ್ಸೂರ್ ಅಗಲಿಕೆ ಕುಟುಂಬಕ್ಕೆ ಆಘಾತ ಉಂಟಾಗಿದೆ. ಮೃತ ಯುವಕ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!