25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

ಬೆಳ್ತಂಗಡಿ : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ಕೋಳಿ ಸಾಗಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು. ಏ.18 ರಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು , ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ನೀರಿನ ಆಳದ ಅರಿವಿಲ್ಲದೆ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬನ್ನೂರು ಪೋಲಿಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೋಲಿಸರು ತಿಳಿಸಿದ್ದಾರೆ.

ಈತ ನಾವೂರು ಗ್ರಾಮದ ಕುದುರು ನಿವಾಸಿ ಹಮೀದ್ ಮತ್ತು ಮೈಮುನ ದಂಪತಿಗಳ ಪುತ್ರ. ಇವರು ಮೂರು ಮಕ್ಕಳಲ್ಲಿ ಓರ್ವ ಈ ಹಿಂದೆ ಮದ್ದಡ್ಕದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದೀಗ ಮನ್ಸೂರ್ ಅಗಲಿಕೆ ಕುಟುಂಬಕ್ಕೆ ಆಘಾತ ಉಂಟಾಗಿದೆ. ಮೃತ ಯುವಕ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Related posts

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya
error: Content is protected !!