25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏ. 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏ. 17ರಂದು ಶಿಶುಮಂದಿರದಲ್ಲಿ ನಡೆಯಿತು.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಉದಯ ಭಟ್ ಕೊಳಬ್ಬೆ ಸಭಾಧ್ಯಕ್ಷತೆ ವಹಿಸಿದ್ದರು. ಅಲೆಕ್ಕಿ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಎನ್, ಸಂಚಾಲಕರಾದ ಅಶೋಕ್ ಎನ್. ಉಪಸ್ಥಿತರಿದ್ದರು.

ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ನವೀನ್, ರಮೇಶ್, ಲಿಂಗಪ್ಪ, ಶ್ರೀಮತಿ ಮಾಲಿನಿ, ಶ್ರೀಮತಿ ವಿದ್ಯಾ ಕುಮಾರಿ, ಸ್ಪೂರ್ತಿ, ಕುಮಾರಿ ದಿಶಾ, ಶ್ರೀಮತಿ ಸರೋಜಿನಿ ಉಪಸ್ಥಿತರಿದ್ದರು.
ಗುರುವರ್ಯರಿಗೆ ಶ್ರೀರಾಮ ಸೇವಾ ಟ್ರಸ್ಟ್ ನ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.
65 ಚಿಣ್ಣರು ಪಾಲ್ಗೊoಡಿದ್ದ ಈ ಶಿಬಿರದಲ್ಲಿ ಸ್ಪೂರ್ತಿ ಯಕ್ಷಿಣಿ ಮಾಯಾ ಲೋಕದ ರಾಜು ಮಕ್ಕಳನ್ನು ಜಾದು ಲೋಕಕ್ಕೆ ಕೊಂಡೊಯ್ದು ರಂಜಿಸಿದರು. ಶ್ರೀರಾಮ ಶಿಶು ಮಂದಿರದ ಮಾತೆಯರು ಉಪಸ್ಥಿತರಿದ್ದರು.
ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ಯೋಗದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ ಕು. ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ರವರಿಗೆ ಸನ್ಮಾನ ಮಾಡಲಾಯಿತು. ಅವರು ಯೋಗಾಸನಗಳನ್ನು ಮಾಡಿ ಮಕ್ಕಳಿಗೆ ಉತ್ತೇಜನ ತುಂಬಿದರು.

ಶಿಬಿರದಲ್ಲಿ ಪೇಪರ್ ಕ್ರಾಫ್ಟ್, ಗೂಡುದೀಪ ತಯಾರಿ, ಕಸದಿಂದ ರಸ, ಬಾಟಲ್ ಪೇಂಟಿಂಗ್, ನೃತ್ಯ ತರಬೇತಿ, ಚಿತ್ರಕಲೆ, ವ್ಯಕ್ತಿತ್ವ ವಿಕಸನ, ಮೋಜಿನ ಆಟಗಳು, ಕುಣಿತ ಭಜನೆ, ಚಿಕ್ಕ ಪ್ರವಾಸ, ಬರವಣಿಗೆ ಅಭ್ಯಾಸ,ಏರೋಬಿಕ್ಸ್, ಯೋಗ, ಮಣ್ಣಿನ ಕರಕುಶಲ ತರಬೇತಿ ನಡೆಯಿತು.
ಶ್ರೀಮತಿ ರತ್ನಾವತಿ ಪ್ರಾರ್ಥನೆ ಸಲ್ಲಿಸಿ, ಶ್ರೀಮತಿ ಪುಷ್ಪಲತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Related posts

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧ ಆಯ್ಕೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya
error: Content is protected !!