26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಡಿ ಪರಿಸರದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ‌ ಸಂಬಂಧಿಸಿದಂತೆ 17 ಮಂದಿ ಆರೋಪಿಗಳ ವಿರುದ್ದ ಹಾಗೂ ಇದಕ್ಕೆ ಸಹಕರಿಸಿದವರ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೋಟೋ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವೇಣೂರು ಬ್ಲಾಕ್ ಸಮಿತಿ ವತಿಯಿಂದ ದೂರು .

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ಮನೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ನೀಡಿರುವ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಸಾವ್ಯ ಮತ್ತು ಪೆರಾಡಿ ಪರಿಸರದ ನಿವಾಸಿಗಳಾದ ವಸಂತ, ರಾಜೇಶ್, ಹರೀಶ್, ದಯಾನಂದ, ರಂಗನಾಥ, ಮೋಹನ್, ಶಮಿತ್, ರವಿ, ರಮೇಶ್ ಕುಲಾಲ್, ಸುರೇಶ್, ಅಶೋಕ ಕುಲಾಲ್, ಧನುಷ್ ಹರದೊಟ್ಟು, ಹರೀಶ್ ಬಂತೊಟ್ಟು, ರಮೇಶ್ ಆರ್.ಕೆ, ಸುರೇಶ್ ಬರೊಟ್ಟು, ಪ್ರಮೋದ್, ಪ್ರಕಾಶ್ ಪೆರಾಡಿ ಮತ್ತು ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.


ಏ.14 ರಂದು ರಾತ್ರಿಯ ವೇಳೆ ಪುರುಷ ಕಟ್ಟುನ‌ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿಕೊಂಡು ಇಸ್ಲಾಂ ಧರ್ಮ, ಪ್ರವಾದಿ ಹಾಗೂ ಆಝಾನ್ ಅನ್ನು ಅವಹೇಳನ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಬಗ್ಗೆ ಕಲಂ 353(2) ಜೊತೆಗೆ 3(5) ಬಿ.ಎನ್.ಎಸ್ 2023 ರಂತೆ ಏ.17 ರಂದು ಪ್ರಕರಣ ದಾಖಲಿಸಲಾಗಿದೆ.

Related posts

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!