ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಡಿ ಪರಿಸರದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ‌ ಸಂಬಂಧಿಸಿದಂತೆ 17 ಮಂದಿ ಆರೋಪಿಗಳ ವಿರುದ್ದ ಹಾಗೂ ಇದಕ್ಕೆ ಸಹಕರಿಸಿದವರ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೋಟೋ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವೇಣೂರು ಬ್ಲಾಕ್ ಸಮಿತಿ ವತಿಯಿಂದ ದೂರು .

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ಮನೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ನೀಡಿರುವ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಸಾವ್ಯ ಮತ್ತು ಪೆರಾಡಿ ಪರಿಸರದ ನಿವಾಸಿಗಳಾದ ವಸಂತ, ರಾಜೇಶ್, ಹರೀಶ್, ದಯಾನಂದ, ರಂಗನಾಥ, ಮೋಹನ್, ಶಮಿತ್, ರವಿ, ರಮೇಶ್ ಕುಲಾಲ್, ಸುರೇಶ್, ಅಶೋಕ ಕುಲಾಲ್, ಧನುಷ್ ಹರದೊಟ್ಟು, ಹರೀಶ್ ಬಂತೊಟ್ಟು, ರಮೇಶ್ ಆರ್.ಕೆ, ಸುರೇಶ್ ಬರೊಟ್ಟು, ಪ್ರಮೋದ್, ಪ್ರಕಾಶ್ ಪೆರಾಡಿ ಮತ್ತು ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.


ಏ.14 ರಂದು ರಾತ್ರಿಯ ವೇಳೆ ಪುರುಷ ಕಟ್ಟುನ‌ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿಕೊಂಡು ಇಸ್ಲಾಂ ಧರ್ಮ, ಪ್ರವಾದಿ ಹಾಗೂ ಆಝಾನ್ ಅನ್ನು ಅವಹೇಳನ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಬಗ್ಗೆ ಕಲಂ 353(2) ಜೊತೆಗೆ 3(5) ಬಿ.ಎನ್.ಎಸ್ 2023 ರಂತೆ ಏ.17 ರಂದು ಪ್ರಕರಣ ದಾಖಲಿಸಲಾಗಿದೆ.

Related posts

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!