July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಡಿ ಪರಿಸರದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ‌ ಸಂಬಂಧಿಸಿದಂತೆ 17 ಮಂದಿ ಆರೋಪಿಗಳ ವಿರುದ್ದ ಹಾಗೂ ಇದಕ್ಕೆ ಸಹಕರಿಸಿದವರ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೋಟೋ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವೇಣೂರು ಬ್ಲಾಕ್ ಸಮಿತಿ ವತಿಯಿಂದ ದೂರು .

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ಮನೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ನೀಡಿರುವ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಸಾವ್ಯ ಮತ್ತು ಪೆರಾಡಿ ಪರಿಸರದ ನಿವಾಸಿಗಳಾದ ವಸಂತ, ರಾಜೇಶ್, ಹರೀಶ್, ದಯಾನಂದ, ರಂಗನಾಥ, ಮೋಹನ್, ಶಮಿತ್, ರವಿ, ರಮೇಶ್ ಕುಲಾಲ್, ಸುರೇಶ್, ಅಶೋಕ ಕುಲಾಲ್, ಧನುಷ್ ಹರದೊಟ್ಟು, ಹರೀಶ್ ಬಂತೊಟ್ಟು, ರಮೇಶ್ ಆರ್.ಕೆ, ಸುರೇಶ್ ಬರೊಟ್ಟು, ಪ್ರಮೋದ್, ಪ್ರಕಾಶ್ ಪೆರಾಡಿ ಮತ್ತು ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.


ಏ.14 ರಂದು ರಾತ್ರಿಯ ವೇಳೆ ಪುರುಷ ಕಟ್ಟುನ‌ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿಕೊಂಡು ಇಸ್ಲಾಂ ಧರ್ಮ, ಪ್ರವಾದಿ ಹಾಗೂ ಆಝಾನ್ ಅನ್ನು ಅವಹೇಳನ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಬಗ್ಗೆ ಕಲಂ 353(2) ಜೊತೆಗೆ 3(5) ಬಿ.ಎನ್.ಎಸ್ 2023 ರಂತೆ ಏ.17 ರಂದು ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya
error: Content is protected !!