25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

ಬೆಳ್ತಂಗಡಿ : ಒಳ್ಳೆಯ ಚಟುವಟಿಕೆಗಳಿಂದ ಶಿಬಿರಾರ್ಥಿಗಳು ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕು. ವಿನೂತನ ರೀತಿಯ ಝೇಂಕಾರ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಕೀಲ,ಬಿಎಂಎಸ್ ಜಿಲ್ಲಾಧ್ಯಕ್ಷ ಯು ಅನಿಲ್ ಕುಮಾರ್ ಹೇಳಿದರು

ಅವರು ಬೆಳ್ತಂಗಡಿ ನಗರ ಪಂಚಾಯತ್ ಬಳಿಯ ಮಹಿಳಾ ವೃಂದದ ಸಭಾಂಗಣದಲ್ಲಿ ಎಂಟು ದಿನಗಳ ಕಾಲ ನಡೆಯುವ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ಕನ್ನಡಮ್ಮ ವಾರಪತ್ರಿಕೆಯ ಸ್ಥಾನೀಯ ಸಂಪಾದಕರಾದ ಮಂಜುಳಾ ಡಿ ಪ್ರಸಾದ್ ರವರು ವಹಿಸಿ ಮಾತನಾಡಿ ತಾಲೂಕಿನ ವಿವಿಧ ಮೂಲೆಗಳಿಂದ ಆಗಮಿಸಿದ ಮಕ್ಕಳು ಒಂದೇ ಸೂರಿನಡಿ ಸೇರಿ ಆನಂದಿಸುವ ಈ ಬೇಸಿಗೆ ಶಿಬಿರವು ಮಕ್ಕಳ ಕ್ರಿಯಾಶೀಲ ಚಿಂತನೆಗೆ ಅಡಿಪಾಯವಾಗುವುದರೊಂದಿಗೆ ರಜಾ ಸಮಯವನ್ನು ಉತ್ತಮ ರೀತಿಯಲ್ಲಿ ಕಳೆಯಲು ಉತ್ತಮ ಅವಕಾಶ ಎಂದು ಹೇಳಿದರು.

ಬೆಳ್ತಂಗಡಿ ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ಚಂದ್ರರವರು ಝೇಂಕಾರ ಬೇಸಿಗೆ ಶಿಬಿರದ ಅಚ್ಚುಕಟ್ಟುತನವನ್ನು ಶ್ಲಾಘಿಸಿ ಶುಭ ಕೋರಿದರು.

ಶಿಬಿರದ ಸಂಯೋಜಕಿ ಹೇಮಾವತಿ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕುಮಾರಿ ನವ್ಯಾ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ‌ಶಿಕ್ಷಕಿ ಹರಿಣಾಕ್ಷಿ ಕೆ ನಿರೂಪಿಸಿ ಧನ್ಯವಾದವಿತ್ತರು.ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿ ರಾಷ್ಟ್ರಮಟ್ಟದ ಕಲಾವಿದರಾದ ಸದಾಶಿವ ಶಿವಗಿರಿ ಕಲ್ಲಡ್ಕ ಶಿಬಿರದ ಚಟುವಟಿಕೆಗಳನ್ನು ನಡೆಸಿಕೊಟ್ಟರು.

Related posts

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!