22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

ಬೆಳ್ತಂಗಡಿ : ಒಳ್ಳೆಯ ಚಟುವಟಿಕೆಗಳಿಂದ ಶಿಬಿರಾರ್ಥಿಗಳು ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕು. ವಿನೂತನ ರೀತಿಯ ಝೇಂಕಾರ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಕೀಲ,ಬಿಎಂಎಸ್ ಜಿಲ್ಲಾಧ್ಯಕ್ಷ ಯು ಅನಿಲ್ ಕುಮಾರ್ ಹೇಳಿದರು

ಅವರು ಬೆಳ್ತಂಗಡಿ ನಗರ ಪಂಚಾಯತ್ ಬಳಿಯ ಮಹಿಳಾ ವೃಂದದ ಸಭಾಂಗಣದಲ್ಲಿ ಎಂಟು ದಿನಗಳ ಕಾಲ ನಡೆಯುವ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ಕನ್ನಡಮ್ಮ ವಾರಪತ್ರಿಕೆಯ ಸ್ಥಾನೀಯ ಸಂಪಾದಕರಾದ ಮಂಜುಳಾ ಡಿ ಪ್ರಸಾದ್ ರವರು ವಹಿಸಿ ಮಾತನಾಡಿ ತಾಲೂಕಿನ ವಿವಿಧ ಮೂಲೆಗಳಿಂದ ಆಗಮಿಸಿದ ಮಕ್ಕಳು ಒಂದೇ ಸೂರಿನಡಿ ಸೇರಿ ಆನಂದಿಸುವ ಈ ಬೇಸಿಗೆ ಶಿಬಿರವು ಮಕ್ಕಳ ಕ್ರಿಯಾಶೀಲ ಚಿಂತನೆಗೆ ಅಡಿಪಾಯವಾಗುವುದರೊಂದಿಗೆ ರಜಾ ಸಮಯವನ್ನು ಉತ್ತಮ ರೀತಿಯಲ್ಲಿ ಕಳೆಯಲು ಉತ್ತಮ ಅವಕಾಶ ಎಂದು ಹೇಳಿದರು.

ಬೆಳ್ತಂಗಡಿ ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಸುಭಾಷ್ ಚಂದ್ರರವರು ಝೇಂಕಾರ ಬೇಸಿಗೆ ಶಿಬಿರದ ಅಚ್ಚುಕಟ್ಟುತನವನ್ನು ಶ್ಲಾಘಿಸಿ ಶುಭ ಕೋರಿದರು.

ಶಿಬಿರದ ಸಂಯೋಜಕಿ ಹೇಮಾವತಿ ಕೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕುಮಾರಿ ನವ್ಯಾ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ‌ಶಿಕ್ಷಕಿ ಹರಿಣಾಕ್ಷಿ ಕೆ ನಿರೂಪಿಸಿ ಧನ್ಯವಾದವಿತ್ತರು.ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂಪನ್ಮೂಲ ವ್ಯಕ್ತಿ ರಾಷ್ಟ್ರಮಟ್ಟದ ಕಲಾವಿದರಾದ ಸದಾಶಿವ ಶಿವಗಿರಿ ಕಲ್ಲಡ್ಕ ಶಿಬಿರದ ಚಟುವಟಿಕೆಗಳನ್ನು ನಡೆಸಿಕೊಟ್ಟರು.

Related posts

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya
error: Content is protected !!