April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏ. 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏ. 17ರಂದು ಶಿಶುಮಂದಿರದಲ್ಲಿ ನಡೆಯಿತು.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಉದಯ ಭಟ್ ಕೊಳಬ್ಬೆ ಸಭಾಧ್ಯಕ್ಷತೆ ವಹಿಸಿದ್ದರು. ಅಲೆಕ್ಕಿ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಎನ್, ಸಂಚಾಲಕರಾದ ಅಶೋಕ್ ಎನ್. ಉಪಸ್ಥಿತರಿದ್ದರು.

ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ನವೀನ್, ರಮೇಶ್, ಲಿಂಗಪ್ಪ, ಶ್ರೀಮತಿ ಮಾಲಿನಿ, ಶ್ರೀಮತಿ ವಿದ್ಯಾ ಕುಮಾರಿ, ಸ್ಪೂರ್ತಿ, ಕುಮಾರಿ ದಿಶಾ, ಶ್ರೀಮತಿ ಸರೋಜಿನಿ ಉಪಸ್ಥಿತರಿದ್ದರು.
ಗುರುವರ್ಯರಿಗೆ ಶ್ರೀರಾಮ ಸೇವಾ ಟ್ರಸ್ಟ್ ನ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.
65 ಚಿಣ್ಣರು ಪಾಲ್ಗೊoಡಿದ್ದ ಈ ಶಿಬಿರದಲ್ಲಿ ಸ್ಪೂರ್ತಿ ಯಕ್ಷಿಣಿ ಮಾಯಾ ಲೋಕದ ರಾಜು ಮಕ್ಕಳನ್ನು ಜಾದು ಲೋಕಕ್ಕೆ ಕೊಂಡೊಯ್ದು ರಂಜಿಸಿದರು. ಶ್ರೀರಾಮ ಶಿಶು ಮಂದಿರದ ಮಾತೆಯರು ಉಪಸ್ಥಿತರಿದ್ದರು.
ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ಯೋಗದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ ಕು. ಅದಿತಿ ಪುರುಷೋತ್ತಮ ಗೌಡ ಪದ್ಮುಂಜ ರವರಿಗೆ ಸನ್ಮಾನ ಮಾಡಲಾಯಿತು. ಅವರು ಯೋಗಾಸನಗಳನ್ನು ಮಾಡಿ ಮಕ್ಕಳಿಗೆ ಉತ್ತೇಜನ ತುಂಬಿದರು.

ಶಿಬಿರದಲ್ಲಿ ಪೇಪರ್ ಕ್ರಾಫ್ಟ್, ಗೂಡುದೀಪ ತಯಾರಿ, ಕಸದಿಂದ ರಸ, ಬಾಟಲ್ ಪೇಂಟಿಂಗ್, ನೃತ್ಯ ತರಬೇತಿ, ಚಿತ್ರಕಲೆ, ವ್ಯಕ್ತಿತ್ವ ವಿಕಸನ, ಮೋಜಿನ ಆಟಗಳು, ಕುಣಿತ ಭಜನೆ, ಚಿಕ್ಕ ಪ್ರವಾಸ, ಬರವಣಿಗೆ ಅಭ್ಯಾಸ,ಏರೋಬಿಕ್ಸ್, ಯೋಗ, ಮಣ್ಣಿನ ಕರಕುಶಲ ತರಬೇತಿ ನಡೆಯಿತು.
ಶ್ರೀಮತಿ ರತ್ನಾವತಿ ಪ್ರಾರ್ಥನೆ ಸಲ್ಲಿಸಿ, ಶ್ರೀಮತಿ ಪುಷ್ಪಲತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

Related posts

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya
error: Content is protected !!