25.7 C
ಪುತ್ತೂರು, ಬೆಳ್ತಂಗಡಿ
April 22, 2025
Uncategorized

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ ವ್ಯಕ್ತಪಡಿಸಿದರು ಇದೇ ಸಮಯದಲ್ಲಿ ಮುಂದಿನ ವರ್ಷದ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ್ ಬಿ.ಪಿ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಮತ್ತು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಕೆ.ಕರುಣಾಕರ ಜೈನ್, ಸಹೋದ್ಯೋಗಿಗಳಾದ ಪ್ರವೀಣ್, ಕಾಶ್ಮೀರ ಡಿ’ಸೋಜಾ, ಸುರೇಶ್ ಗೌಡ ಜೊತೆಗೆ ಇದ್ದರು.
ಈ ವರ್ಷ 33 ಸ್ವ ಉದ್ಯೋಗ ತರಬೇತಿಗಳನ್ನು ನಡೆಸಿ, 1012ಜನ ನಿರೋದ್ಯಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ. ಈ ವರ್ಷ 730 ಜನ ಸ್ವ ಉದ್ಯೋಗ ಆರಂಭಿಸಿ ಸ್ವಂತ ಬದುಕು ನಡೆಸು ಮೂಲಕ ಯಶಸ್ಸಿನ ಪ್ರಮಾಣ ಶೇಕಾಡ 72% ರಷ್ಟಿದ್ದು. ಇದು ಮತ್ತೊಂದು ಮೈಲಿಗಲ್ಲನ್ನು ತಲುಪಿದೆ.

Related posts

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!