September 6, 2026
Uncategorized

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ ವ್ಯಕ್ತಪಡಿಸಿದರು ಇದೇ ಸಮಯದಲ್ಲಿ ಮುಂದಿನ ವರ್ಷದ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ್ ಬಿ.ಪಿ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಮತ್ತು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಕೆ.ಕರುಣಾಕರ ಜೈನ್, ಸಹೋದ್ಯೋಗಿಗಳಾದ ಪ್ರವೀಣ್, ಕಾಶ್ಮೀರ ಡಿ’ಸೋಜಾ, ಸುರೇಶ್ ಗೌಡ ಜೊತೆಗೆ ಇದ್ದರು.
ಈ ವರ್ಷ 33 ಸ್ವ ಉದ್ಯೋಗ ತರಬೇತಿಗಳನ್ನು ನಡೆಸಿ, 1012ಜನ ನಿರೋದ್ಯಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ. ಈ ವರ್ಷ 730 ಜನ ಸ್ವ ಉದ್ಯೋಗ ಆರಂಭಿಸಿ ಸ್ವಂತ ಬದುಕು ನಡೆಸು ಮೂಲಕ ಯಶಸ್ಸಿನ ಪ್ರಮಾಣ ಶೇಕಾಡ 72% ರಷ್ಟಿದ್ದು. ಇದು ಮತ್ತೊಂದು ಮೈಲಿಗಲ್ಲನ್ನು ತಲುಪಿದೆ.

Related posts

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!