25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ರಿ. ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಎ.17 ರಂದು ನಡೆದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ ಸಮಾರಂಭವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪುಂಜಾಲಕಟ್ಟೆಯ ಶ್ರೀ ಗೋಪಾಲಕಷ್ಣ ದೇವಸ್ಥಾನದ ರಾಧಾಕೃಷ್ಣ ಸಭಾ ಭವನದಲ್ಲಿ ಶ್ರೀ ಪ್ರಭಾಕರ ಭಟ್ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಂಗಳೂರಿನ ಪರಮತಾಳ ಭಜನಾ ತಂಡದ ಶ್ರೀಮತಿ ಸುಜಾತಾ ಸಾಮಂತ್, ರಂಜಿತಾ ನಾಯಕ್, ಶ್ವೇತಾ ಕಾಮತ್ ಹಾಗು ನಮ್ಮ ಸಂಘದ ಸದಸ್ಯರು ಸುಮಧುರ ಹಾಗೂ ಭಕ್ತಿಪೂರ್ವಕ ಭಜನಾ ಸೇವೆಯನ್ನು ನಡೆಸಿಕೊಟ್ಟರು. ನಮ್ಮ ಸಮಾಜದ ಸುಮಾರು 175 ಜನ ಜಾತಿ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ

ಗೌರವಾನ್ವಿತರಾದ ಸರ್ವಶ್ರೀ ರಮೇಶ ನಾಯಕ್ ಮೈರ, ಗಣಪತಿ ಶೆಣೈ ಡೆಚ್ಚಾರು, ಮೋಹನ್ ಪ್ರಭು ಪೆರ್ಮರೋಡಿ, ಪೂರ್ಣಿಮಾ ನಾಯಕ್, ಮಾಲತಿ ಪ್ರಭು, ಕಸ್ತೂರಿ ನಾಯಕ್, ಪ್ರಭಾಕರ ಭಟ್ ಇಡ್ಯಾ ಉಪಸ್ಥಿತರಿದ್ದರು. ಶ್ರೀ ಸುಧಾಕರ ಪ್ರಭು ಪೆರ್ಮರೋಡಿ ವರದಿ ವಾಚಿಸಿದರು. ಸಂಚಾಲಕರಾದ ದಯಾನಂದ ನಾಯಕ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಮುಂದಿನ ಎರಡು ವರ್ಷಕ್ಕೆ ಸಂಘದ ಅಧ್ಯಕ್ಷ ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಮುದಲಡ್ಕ, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಪ್ರಭು ಗುಂಡಿದಡ್ಡ ಹಾಗೂ ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು ಅವಿರೋಧವಾಗಿ ಆಯ್ಕೆಯಾದರು. ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.ಈ ಎಲ್ಲಾ ಕಾರ್ಯಕ್ರಮಗಳು ಸಂಚಾಲಕರಾದ ದಯಾನಂದ ನಾಯಕ್ ಪೂಂಜಾಲಕಟ್ಟೆ ಹಾಗೂ ಗೌರವಾನ್ವಿತ ಶ್ರೀ ಸುಧಾಕರ ಪ್ರಭು ಪೆರ್ಮರೋಡಿ ಇವರ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು..

Related posts

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya
error: Content is protected !!