September 6, 2026
ಗ್ರಾಮಾಂತರ ಸುದ್ದಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ರಿ. ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಎ.17 ರಂದು ನಡೆದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ ಸಮಾರಂಭವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪುಂಜಾಲಕಟ್ಟೆಯ ಶ್ರೀ ಗೋಪಾಲಕಷ್ಣ ದೇವಸ್ಥಾನದ ರಾಧಾಕೃಷ್ಣ ಸಭಾ ಭವನದಲ್ಲಿ ಶ್ರೀ ಪ್ರಭಾಕರ ಭಟ್ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಂಗಳೂರಿನ ಪರಮತಾಳ ಭಜನಾ ತಂಡದ ಶ್ರೀಮತಿ ಸುಜಾತಾ ಸಾಮಂತ್, ರಂಜಿತಾ ನಾಯಕ್, ಶ್ವೇತಾ ಕಾಮತ್ ಹಾಗು ನಮ್ಮ ಸಂಘದ ಸದಸ್ಯರು ಸುಮಧುರ ಹಾಗೂ ಭಕ್ತಿಪೂರ್ವಕ ಭಜನಾ ಸೇವೆಯನ್ನು ನಡೆಸಿಕೊಟ್ಟರು. ನಮ್ಮ ಸಮಾಜದ ಸುಮಾರು 175 ಜನ ಜಾತಿ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ

ಗೌರವಾನ್ವಿತರಾದ ಸರ್ವಶ್ರೀ ರಮೇಶ ನಾಯಕ್ ಮೈರ, ಗಣಪತಿ ಶೆಣೈ ಡೆಚ್ಚಾರು, ಮೋಹನ್ ಪ್ರಭು ಪೆರ್ಮರೋಡಿ, ಪೂರ್ಣಿಮಾ ನಾಯಕ್, ಮಾಲತಿ ಪ್ರಭು, ಕಸ್ತೂರಿ ನಾಯಕ್, ಪ್ರಭಾಕರ ಭಟ್ ಇಡ್ಯಾ ಉಪಸ್ಥಿತರಿದ್ದರು. ಶ್ರೀ ಸುಧಾಕರ ಪ್ರಭು ಪೆರ್ಮರೋಡಿ ವರದಿ ವಾಚಿಸಿದರು. ಸಂಚಾಲಕರಾದ ದಯಾನಂದ ನಾಯಕ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಮುಂದಿನ ಎರಡು ವರ್ಷಕ್ಕೆ ಸಂಘದ ಅಧ್ಯಕ್ಷ ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಮುದಲಡ್ಕ, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಪ್ರಭು ಗುಂಡಿದಡ್ಡ ಹಾಗೂ ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು ಅವಿರೋಧವಾಗಿ ಆಯ್ಕೆಯಾದರು. ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.ಈ ಎಲ್ಲಾ ಕಾರ್ಯಕ್ರಮಗಳು ಸಂಚಾಲಕರಾದ ದಯಾನಂದ ನಾಯಕ್ ಪೂಂಜಾಲಕಟ್ಟೆ ಹಾಗೂ ಗೌರವಾನ್ವಿತ ಶ್ರೀ ಸುಧಾಕರ ಪ್ರಭು ಪೆರ್ಮರೋಡಿ ಇವರ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು..

Related posts

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!