32.6 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ ವ್ಯಕ್ತಪಡಿಸಿದರು ಇದೇ ಸಮಯದಲ್ಲಿ ಮುಂದಿನ ವರ್ಷದ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ್ ಬಿ.ಪಿ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಮತ್ತು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಕೆ.ಕರುಣಾಕರ ಜೈನ್, ಸಹೋದ್ಯೋಗಿಗಳಾದ ಪ್ರವೀಣ್, ಕಾಶ್ಮೀರ ಡಿ’ಸೋಜಾ, ಸುರೇಶ್ ಗೌಡ ಜೊತೆಗೆ ಇದ್ದರು.
ಈ ವರ್ಷ 33 ಸ್ವ ಉದ್ಯೋಗ ತರಬೇತಿಗಳನ್ನು ನಡೆಸಿ, 1012ಜನ ನಿರೋದ್ಯಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ. ಈ ವರ್ಷ 730 ಜನ ಸ್ವ ಉದ್ಯೋಗ ಆರಂಭಿಸಿ ಸ್ವಂತ ಬದುಕು ನಡೆಸು ಮೂಲಕ ಯಶಸ್ಸಿನ ಪ್ರಮಾಣ ಶೇಕಾಡ 72% ರಷ್ಟಿದ್ದು. ಇದು ಮತ್ತೊಂದು ಮೈಲಿಗಲ್ಲನ್ನು ತಲುಪಿದೆ.

Related posts

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!