September 6, 2026
Uncategorized

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ ವ್ಯಕ್ತಪಡಿಸಿದರು ಇದೇ ಸಮಯದಲ್ಲಿ ಮುಂದಿನ ವರ್ಷದ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ್ ಬಿ.ಪಿ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಮತ್ತು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಕೆ.ಕರುಣಾಕರ ಜೈನ್, ಸಹೋದ್ಯೋಗಿಗಳಾದ ಪ್ರವೀಣ್, ಕಾಶ್ಮೀರ ಡಿ’ಸೋಜಾ, ಸುರೇಶ್ ಗೌಡ ಜೊತೆಗೆ ಇದ್ದರು.
ಈ ವರ್ಷ 33 ಸ್ವ ಉದ್ಯೋಗ ತರಬೇತಿಗಳನ್ನು ನಡೆಸಿ, 1012ಜನ ನಿರೋದ್ಯಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ. ಈ ವರ್ಷ 730 ಜನ ಸ್ವ ಉದ್ಯೋಗ ಆರಂಭಿಸಿ ಸ್ವಂತ ಬದುಕು ನಡೆಸು ಮೂಲಕ ಯಶಸ್ಸಿನ ಪ್ರಮಾಣ ಶೇಕಾಡ 72% ರಷ್ಟಿದ್ದು. ಇದು ಮತ್ತೊಂದು ಮೈಲಿಗಲ್ಲನ್ನು ತಲುಪಿದೆ.

Related posts

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!