July 23, 2026
Uncategorized

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ ವ್ಯಕ್ತಪಡಿಸಿದರು ಇದೇ ಸಮಯದಲ್ಲಿ ಮುಂದಿನ ವರ್ಷದ ಚಟುವಟಿಕೆಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ್ ಬಿ.ಪಿ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಮತ್ತು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಕೆ.ಕರುಣಾಕರ ಜೈನ್, ಸಹೋದ್ಯೋಗಿಗಳಾದ ಪ್ರವೀಣ್, ಕಾಶ್ಮೀರ ಡಿ’ಸೋಜಾ, ಸುರೇಶ್ ಗೌಡ ಜೊತೆಗೆ ಇದ್ದರು.
ಈ ವರ್ಷ 33 ಸ್ವ ಉದ್ಯೋಗ ತರಬೇತಿಗಳನ್ನು ನಡೆಸಿ, 1012ಜನ ನಿರೋದ್ಯಗಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ. ಈ ವರ್ಷ 730 ಜನ ಸ್ವ ಉದ್ಯೋಗ ಆರಂಭಿಸಿ ಸ್ವಂತ ಬದುಕು ನಡೆಸು ಮೂಲಕ ಯಶಸ್ಸಿನ ಪ್ರಮಾಣ ಶೇಕಾಡ 72% ರಷ್ಟಿದ್ದು. ಇದು ಮತ್ತೊಂದು ಮೈಲಿಗಲ್ಲನ್ನು ತಲುಪಿದೆ.

Related posts

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
error: Content is protected !!