September 6, 2026
Uncategorizedರಾಜಕೀಯ

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಬೆಳ್ತಂಗಡಿ: ಇಂದು ಗುರುವಾಯನಕೆರೆಯ ಶಕ್ತಿನಗರದಲ್ಲಿ ನಡೆಯಲಿರುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದ ಘಟನೆ ಗುರುವಾಯನಕೆರೆಯಲ್ಲಿ ನಡೆದಿದೆ.

ಸಮಾವೇಶದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚೆಲುವರಾಯ ಸ್ವಾಮಿ , ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತಾರು ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಕ್ಸ್ ಗಳನ್ನು ಅಳವಡಿಸಲಾಗಿತ್ತು.

ಕಳೆದ ರಾತ್ರಿ ಗುರುವಾಯನಕೆರೆ ಎಂಬಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಘಟನೆಯನ್ನು ಖಂಡಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ” ಪಕ್ಷದ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಾರ್ಯಕರ್ತರು ಹತಾಶೆಯಿಂದ ಈ ಕಾರ್ಯ ನಡೆಸಿದ್ದಾರೆ. ಇಂತಹ ಕಾರ್ಯದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಮತ್ತು ಪಕ್ಷವನ್ನು ಬೆದರಿಸಲು ಸಾಧ್ಯವಿಲ್ಲ. ನೀವು ಚಿವುಟಿದಷ್ಟು ನಾವು ಚಿಗುರುತ್ತೇವೆ ಇಂದಿನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ ಎಂದಿದ್ದಾರೆ.

Related posts

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya
error: Content is protected !!